ಹಿರಿಯೂರು: ನಗರದ ರಂಜಿತ ಹೋಟೆಲ್ ವೃತ್ತದ ಸಮೀಪ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 1 ಲಕ್ಷವನ್ನು ತಹಶೀಲ್ದಾರ್ ಪ್ರಶಾಂತ್ ಕೆ. ಪಾಟೀಲ್ ಅವರು ಶುಕ್ರವಾರ ರಾತ್ರಿ ವಶಪಡಿಸಿಕೊಂಡರು.
ರಂಜಿತ ಹೋಟೆಲ್ ಸಮೀಪದ ಚುನಾವಣಾ ಚೆಕ್ಪೋಸ್ಟ್ಗೆ ಭೇಟಿ ನೀಡಿದ್ದ ಪ್ರಶಾಂತ್ ಪಾಟೀಲ್, ಟಾಟಾ ಎಸಿ ವಾಹನದಲ್ಲಿ ಕೊಪ್ಪಳ ಮೂಲದ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಡಿ ವಶಕ್ಕೆ ಪಡೆದಿದ್ದಾರೆ.
ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.