ADVERTISEMENT

ವಾಹನ ಡಿಕ್ಕಿ: ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 16:17 IST
Last Updated 1 ಜುಲೈ 2020, 16:17 IST

ಹಿರಿಯೂರು:ನಗರದ ಚಳ್ಳಕೆರೆ ರಸ್ತೆಯಲ್ಲಿಮಂಗಳವಾರ ರಾತ್ರಿಪಾದಚಾರಿ ಮಹಿಳೆಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಾಣಿ ಸಕ್ಕರೆ ಕಾರ್ಖಾನೆ ಆವರಣದಲ್ಲಿನ ವಸತಿ ಗೃಹದ ನಿವಾಸಿ ರೇಣುಕಾ (32) ಮೃತಪಟ್ಟವರು. ಕೃಷಿ ಇಲಾಖೆ ಹಿಂಭಾಗದಲ್ಲಿನ ಮನೆಗಳಿಗೆ ಹಾಲು ಕೊಟ್ಟು ಮರಳುವಾಗ ಈ ಅಪಘಾತ ಸಂಭವಿಸಿದೆ ಎಂದು ಪ್ರಕರಣ ದಾಖಲು ಮಾಡಿಕೊಂಡಿರುವ ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT