ADVERTISEMENT

ಹೊಸದುರ್ಗ: ಪ್ರವಾಹದ ನೀರಿನಲ್ಲಿ ಸಿಲುಕಿದ್ದ ಪಶುವೈದ್ಯರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2019, 4:27 IST
Last Updated 22 ಅಕ್ಟೋಬರ್ 2019, 4:27 IST
ಪ್ರವಾಹದಲ್ಲಿ ಸಿಲುಕಿದ್ದ ಪಶುವೈದ್ಯರ ಕಾರು.
ಪ್ರವಾಹದಲ್ಲಿ ಸಿಲುಕಿದ್ದ ಪಶುವೈದ್ಯರ ಕಾರು.   

ಚಿತ್ರದುರ್ಗ: ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕೆ ಹಾಕಲು ತೆರಳಿ ಹರಿಯುತ್ತಿದ್ದ ನೀರಿನಲ್ಲಿ ಅಪಾಯಕ್ಕೆ ಸಿಲುಕಿದ್ದ ಪಶು ವೈದ್ಯರಿಬ್ಬರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಪಶುವೈದ್ಯರಾದ ಡಾ.ಅರವಿಂದ ಮತ್ತು ಡಾ.ದಿವ್ಯಾಅಪಾಯದಿಂದ ಪಾರಾಗಿದ್ದಾರೆ. ಅವರು ಚಲಿಸುತ್ತಿದ್ದ ಕಾರಿನ ರಕ್ಷಣೆ ಕಾರ್ಯಾಚರಣೆ ಮುಂದುವರೆದಿದೆ.ಹೊಸದುರ್ಗ ತಾಲ್ಲೂಕಿನ ಜಾನಕಲ್ ಗ್ರಾಮದ ಬಳಿ ಘಟನೆ ನಡೆದಿದೆ.

ಜಾನಕಲ್ ಗ್ರಾಮದಿಂದ ಹೊಸದುರ್ಗಕ್ಕೆ ತೆರಳುವಾಗ ಹಾಲುರಾಮೇಶ್ವರ ಗ್ರಾಮದ ಹತ್ತಿರ ಅವರ ಕಾರು ಪ್ರವಾಹಕ್ಕೆ ಸಿಲುಕಿದೆ. ತುಂಬಾ ಅಪಾಯ ಪರಿಸ್ಥಿತಿಯಲ್ಲಿ ಇರುವುದನ್ನು ಪಶುವೈದ್ಯಾಧಿಕಾರಿ ಡಾ.ಇ. ಕೆ. ಶಿವಣ್ಣ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ಹೊಸದುರ್ಗ ಪೊಲೀಸರಿಗೆ ವಿಷಯ ತಿಳಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.