ಚಿತ್ರದುರ್ಗ: ಪೋಕ್ಸೊ ಕಾಯ್ದೆಯಡಿ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪ್ರಕರಣದಲ್ಲಿ ಸಂತ್ರಸ್ತರಾಗಿರುವ ಬಾಲಕಿಯರನ್ನು ನಗರದ ನ್ಯಾಯಾಲಯಕ್ಕೆ ಮಂಗಳವಾರ ಮಧ್ಯಾಹ್ನ ಹಾಜರುಪಡಿಸಿ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸಲಾಗುತ್ತಿದೆ.
ಬಾಲಕಿಯರ ಸರ್ಕಾರಿ ಬಾಲ ಮಂದಿರದಿಂದ ಮಧ್ಯಾಹ್ನ 2 ಗಂಟೆಗೆ ಪೊಲೀಸ್ ಭದ್ರತೆಯಲ್ಲಿ ಒಡನಾಡಿ ಸಿಬ್ಬಂದಿ ಹಾಗೂ ಬಾಲಭವನದ ಅಧಿಕಾರಿಗಳ ತಂಡ 2.10 ಕ್ಕೆ ಬಾಲಕಿಯರನ್ನು ನ್ಯಾಯಾಲಯಕ್ಕೆ ಕರೆ ತಂದಿತು. ಎರಡನೇ ಜೆಎಂಎಫ್ ಸಿ ನ್ಯಾಯಾಲಯದೊಳಗೆ ತೆರಳಿದ ಬಾಲಕಿಯರಿಂದ ಸಿಆರ್ ಪಿಸಿ 164 ಅಡಿ ಹೇಳಿಕೆ ದಾಖಲಿಸಿಕೊಳ್ಳಲಾಯಿತು.
ಬಾಲಕಿಯರನ್ನು ಕರೆ ತರುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಕೋರ್ಟ್ ಹೊರ ಭಾಗದಲ್ಲಿ ಸಾರ್ವಜನಿಕರು ಜಮಾಯಿಸಿದರು. ಪೊಲೀಸರು ಗುಂಪನ್ನು ಚದುರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.