ADVERTISEMENT

ಕವಾಡಿಗರಹಟ್ಟಿಗೆ ಪೂರೈಕೆಯಾದ ನೀರು ಕುಡಿಯಲು ಯೋಗ್ಯವಾಗಿಲ್ಲ‌: ಆರೋಗ್ಯ ಇಲಾಖೆ ವರದಿ

ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಘಟಕದ ವರದಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2023, 11:00 IST
Last Updated 3 ಆಗಸ್ಟ್ 2023, 11:00 IST
   

ಚಿತ್ರದುರ್ಗ: ಇಲ್ಲಿನ ಕವಾಡಿಗರಹಟ್ಟಿಗೆ ನಗರಸಭೆ ವತಿಯಿಂದ ಪೂರೈಕೆ ಮಾಡಿದ ನೀರು ಕುಡಿಯಲು ಯೋಗ್ಯವಾಗಿರಲಿಲ್ಲ ಎಂದು ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಘಟಕ ವರದಿ ನೀಡಿದೆ.

ಕವಾಡಿಗರಹಟ್ಟಿಗೆ ಪೂರೈಕೆ ಮಾಡಿದ ನೀರಿನ ಐದು ಮಾದರಿಗಳಲ್ಲಿ ನಾಲ್ಕು ಮಾದರಿಯ ಸೂಕ್ಷ್ಮ ಜೀವಾಣು ಪರೀಕ್ಷಾ ಫಲಿತಾಂಶ ಗುರುವಾರ ಲಭ್ಯವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕದ ನೀರಿನ ವರದಿಯನ್ನು ಕಾಯ್ದಿರಿಸಲಾಗಿದೆ.

ಕವಾಡಿಗರಹಟ್ಟಿಯ ಓವರ್ ಹೆಡ್ ಟ್ಯಾಂಕ್, ಪ್ರಿಯದರ್ಶಿನಿ ಬಾಲಕರ ಪ್ರೌಢಶಾಲೆ ಸಮೀಪದ ಮಿನಿ ಟ್ಯಾಂಕ್, ಕೊಳವೆ ಮಾರ್ಗದ ಮೂಲಕ ಮನೆಗಳಿಗೆ ಪೂರೈಕೆ ಮಾಡಿದ ನಲ್ಲಿ ನೀರು ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆ.1ರಂದು ಸಂಗ್ರಹಿಸಿದ ನೀರಿನ ಮಾದರಿಯ ವರದಿ ಗುರುವಾರ ಜಿಲ್ಲಾಡಳಿತದ ಕೈಸೇರಿದೆ.

ADVERTISEMENT

ಇದನ್ನೂ ಓದಿ: ಚಿತ್ರದುರ್ಗ ಕಲುಷಿತ ನೀರು ಪ್ರಕರಣ: ನೀರಿಗೆ ವಿಷ ಬೆರೆಸಿದ ಆರೋಪ, ತನಿಖೆ ಆರಂಭ

ಕುಡಿಯುವ ನೀರು ಪೂರೈಕೆ ಮಾಡುವ ಸಂಗ್ರಹಗಾರ ಹಾಗೂ ಕೊಳವೆ ಮಾರ್ಗವನ್ನು ಶುಚಿಗೊಳಿಸುವಂತೆ ವರದಿಯಲ್ಲಿ ಸಲಹೆ ನೀಡಲಾಗಿದೆ. ವಾಂತಿ ಭೇದಿ ಪ್ರಕರಣ ಬೆಳಕಿಗೆ ಬಂದ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ಈ ನೀರಿನ ಪೂರೈಕೆಯನ್ನು ನಗರಸಭೆ ಸ್ಥಗಿತಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.