ADVERTISEMENT

ಬಾಲಕಿ ಸಾವು: ಡೆಂಗೆ ಶಂಕೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2020, 13:07 IST
Last Updated 27 ಮಾರ್ಚ್ 2020, 13:07 IST

ಮೊಳಕಾಲ್ಮುರು: ತಾಲ್ಲೂಕಿನ ಅಶೋಕ ಸಿದ್ದಾಪುರ ಗ್ರಾಮದ ಎಸ್‌ಸಿ ಕಾಲೊನಿಯಲ್ಲಿ ಶುಕ್ರವಾರ ಅನನ್ಯ (8) ಎಂಬ ಬಾಲಕಿ ಜ್ವರದಿಂದ ಮೃತಪಟ್ಟಿದ್ದಾಳೆ.

ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾಳೆ.

ಸಾವಿಗೆ ಡೆಂಗೆ ಕಾರಣ ಎಂದು ಮೃತ ಬಾಲಕಿಯ ತಂದೆ ಆಂಜನೇಯ ಆರೋಪಿಸಿದ್ದಾರೆ. ವಿಮ್ಸ್ ವೈದ್ಯರು ಡೆಂಗೆ ಲಕ್ಷಣಗಳಿವೆ ಎಂದು ಶಂಕೆ ವ್ಯಕ್ತಪಡಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ADVERTISEMENT

ಆರೋಗ್ಯ ಇಲಾಖೆ ಸಿಬ್ಬಂದಿ ಕೂಡಲೇ ಕಾಲೊನಿಗೆ ಭೇಟಿ ನೀಡಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.