ಬೆಂಗಳೂರು: ‘ಎಲ್ಲ ವಿಶ್ವವಿದ್ಯಾಲಯಗಳ ವ್ಯವಹಾರಗಳು ಜ. 1ರಿಂದ ಸಂಪೂರ್ಣವಾಗಿ ಇ-ಆಫೀಸ್ ಮೂಲಕವೇ ನಡೆಯಲಿದ್ದು, ಎಲ್ಲ ಕಡತ ಮತ್ತು ಪತ್ರಗಳು ಇ- ಆಫೀಸ್ ಮೂಲಕವೇ ನಿರ್ವಹಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
‘ಈಗಾಗಲೇ ಉನ್ನತ ಶಿಕ್ಷಣ ಇಲಾಖೆ ಸಂಪೂರ್ಣವಾಗಿ ಇ-ಆಫೀಸ್ ಮೂಲಕವೇ ನಡೆಯುತ್ತಿದೆ. 2021 ವರ್ಷವನ್ನು ಇ-ಆಫೀಸ್ ವ್ಯವಸ್ಥೆಯ ಮೂಲಕ ಆರಂಭಿಸುತ್ತೇನೆ. ಕ್ಷಿಪ್ರ ಮತ್ತು ಪಾರದರ್ಶಕವಾಗಿ ಜನಪರ ಕಾರ್ಯಗಳ ಅನುಷ್ಠಾನಕ್ಕೆ ಈ ರೀತಿಯಲ್ಲಿ ವ್ಯವಸ್ಥೆ ಅಗತ್ಯವಾಗಿದೆ’ ಎಂದು ಅವರು ಹೇಳಿದ್ದಾರೆ.
‘ಗುರುವಾರ ರಾತ್ರಿ ( ಡಿ. 31) ಒಂಬತ್ತು ಗಂಟೆಯವರೆಗೆ ಗೃಹ ಕಚೇರಿಯಲ್ಲಿದ್ದು ಎಲ್ಲ ಕಡತಗಳನ್ನು ವಿಲೇವಾರಿ ಮಾಡಿದ್ದೇನೆ. ನನ್ನ ವ್ಯಾಪ್ತಿಯ ಯಾವುದೇ ಇಲಾಖೆಯಲ್ಲಿ ಯಾವ ಕಡತವೂ ಬಾಕಿ ಬಿದ್ದಿಲ್ಲ. ಇದರಿಂದ ನನ್ನ ಕರ್ತವ್ಯದ ಬಗ್ಗೆ ಸಂಪೂರ್ಣತೆಯ ಭಾವ ಬಂದಿದೆ’ ಎಂದೂ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.