ADVERTISEMENT

ಇಂದಿರಾ ಕ್ಯಾಂಟೀನ್‌ಗೆ ಹಾನಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2018, 8:40 IST
Last Updated 8 ಮಾರ್ಚ್ 2018, 8:40 IST

ಮಂಗಳೂರು: ನಗರದ ಪುರಭವನದ ಪಕ್ಕದಲ್ಲಿ ಮಂಗಳವಾರವಷ್ಟೇ ಉದ್ಘಾ ಟನೆಗೊಂಡಿರುವ ಇಂದಿರಾ ಕ್ಯಾಂಟೀನ್‌ ಕಟ್ಟಡಕ್ಕೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ.

ಇಂದಿರಾ ಕ್ಯಾಂಟೀನ್‌ನಲ್ಲಿ ಗ್ರಾಹಕರು ಕೈ ತೊಳೆಯುವ ಸ್ಥಳದಲ್ಲಿ ಒಂದು ನಲ್ಲಿಯನ್ನು ತುಂಡರಿಸಲಾಗಿದೆ. ಶೌಚಾಲಯದ ಬಾಗಿಲಿಗೂ ಹಾನಿ ಮಾಡಲಾಗಿದೆ. ಬುಧವಾರ ಬೆಳಿಗ್ಗೆ ಸಿಬ್ಬಂದಿ ಬಂದಾಗ ದುಷ್ಕೃತ್ಯ ನಡೆದಿರು ವುದು ಗೊತ್ತಾಗಿದೆ.

ಇಂದಿರಾ ಕ್ಯಾಂಟೀನ್‌ ನಿರ್ವಹಣೆಯ ಹೊಣೆ ಹೊತ್ತಿರುವ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳವಾರ ತಡರಾತ್ರಿಯ ಬಳಿಕ ಕೃತ್ಯ ಎಸಗಿರುವ ಶಂಕೆ ಇದೆ. ಘಟನೆಗೆ ಸಂಬಂಧಿಸಿದಂತೆ ಈವರೆಗೂ ಪೊಲೀಸ್‌ ಠಾಣೆಗೆ ದೂರು ನೀಡಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.