ಉಡುಪಿ: ಜೇಸಿಐ ಉದ್ಯಾವರ ಕುತ್ಪಾಡಿ ಸಂಸ್ಥಯು ಉಡುಪಿಯ ಚಂದು ಮೈದಾನದಲ್ಲಿರುವ ಪೊಲೀಸ್ ತರಬೇತಿ ಶಾಲೆಯ ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ‘ಮಾನವೀಯ ಸಂಬಂಧಗಳು’ ವಿಷಯದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಶನಿವಾರ ಆಯೋಜಿಸಲಾಗಿತ್ತು.
ಹೆಚ್ಚುವರಿ ಪೊಲೀಸ್ ವರೀಷ್ಠಾಧಿಕಾರಿ ಸಂತೋಷ್ ಕುಮಾರ್ ಕಾರ್ಯಾಗಾರ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಉದ್ಯಾವರ ಕುತ್ಪಾಡಿ ಘಟಕದ ಅಧ್ಯಕ್ಷ ಮೈಕಲ್ ಡಿಸೋಜ ವಹಿಸಿದ್ದರು. ಅತಿಥಿಗಳಾಗಿ ವಿವಿಯನ್ ಪಿರೇರಾ, ರತ್ನಾಕರ ಇಂದ್ರಾಳಿ ಇದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಜೇಸಿ ರಾಷ್ಟ್ರೀಯ ತರಬೇತುದಾರ ರಾಜಶ್ರೀ ಬಜೆ, ರಾಂಚಿರವರು ಪೊಲೀಸ್ ಪ್ರಶಿಕ್ಷಣಾರ್ಥಿಯವರಿಗೆ ಮಾನವೀಯ ಸಂಬಂಧಗಳ ಬಗ್ಗೆ ಮಾಹಿತಿ ನೀಡಿದರು.
ರಮೇಶ್ ಕುಮಾರ್ ಉದ್ಯಾವರ, ಕಾರ್ಯದರ್ಶಿ ದಯಾನಂದ ಶೆಟ್ಟಿ, ಜೇಸಿ ಸಪ್ತಾಹದ ಮಹಾನಿರ್ದೇಶಕ ಅಶೋಕ್ ಪಾಲನ್, ಹರೀಶ್, ಪೊಲೀಸ್ ಇನ್ಸ್ಪೆಕ್ಟರ್ ಆಲಿ ಎ. ಶೇಕ್ ಉಮೇಶ್ ಪಿ., ಆರ್.ಎಸ್.ಐ. ಶ್ರೀನಿವಾಸ್ ಮತ್ತು ಪ್ರಕಾಶ್ ಇದ್ದರು. ಈ ಕಾರ್ಯಾಗಾರದಲ್ಲಿ 78 ಜನ ಪೊಲೀಸ್ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.