ADVERTISEMENT

ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಧ್ವನಿವರ್ಧಕ ಬಳಕೆ ವಿವಾದ: ದೇಗುಲಕ್ಕೆ ಪೊಲೀಸ್ ಭದ್ರತೆ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2017, 7:33 IST
Last Updated 23 ಡಿಸೆಂಬರ್ 2017, 7:33 IST
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಧ್ವನಿವರ್ಧಕ ಬಳಕೆ ವಿವಾದ: ದೇಗುಲಕ್ಕೆ ಪೊಲೀಸ್ ಭದ್ರತೆ
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಧ್ವನಿವರ್ಧಕ ಬಳಕೆ ವಿವಾದ: ದೇಗುಲಕ್ಕೆ ಪೊಲೀಸ್ ಭದ್ರತೆ   

ಮಂಗಳೂರು: ಇಲ್ಲಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಧ್ವನಿವರ್ಧಕ ಬಳಕೆ ವಿವಾದ ಸಂಬಂಧ ದೇವಸ್ಥಾನಕ್ಕೆ ಶನಿವಾರ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ದೇವಸ್ಥಾನದಲ್ಲಿ ಧ್ವನಿವರ್ಧಕ ಬಳಸುವುದರಿಂದ ಸುತ್ತಮುತ್ತಲಿನ ಮನೆಗಳಲ್ಲಿ ಇರುವವರಿಗೆ ತೊಂದರೆ ಆಗುತ್ತಿದೆ ಎಂದು ಹೇಳಿ ಬ್ಲೇನಿ ಡಿಸೋಜ ಎಂಬವರು ಮೇಯರ್‌ಗೆ ಪತ್ರ ಬರೆದಿದ್ದರು.

ಇದರ ವಿರುದ್ಧ ವಿಶ್ವ ಹಿಂದೂ ಪರಿಷತ್ ಇಂದು ಪ್ರತಿಭಟನೆಗೆ ಮುಂದಾಗಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಸುವ ಸೂಚನೆ ಲಭಿಸಿದ್ದರಿಂದ ದೇವಸ್ಥಾನಕ್ಕೆ ಭದ್ರತೆ ಒದಗಿಸಲಾಗಿದೆ.

ADVERTISEMENT

ಹೀಗಿದ್ದರೂ ಭಕ್ತರು ಎಂದಿನಂತೆ ದೇವಸ್ಥಾನಕ್ಕೆ ಬಂದು ಹೋಗುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.