ADVERTISEMENT

ಮೂಡುಬಿದಿರೆ ಮಾರುಕಟ್ಟೆ ಕಾಮಗಾರಿ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2017, 9:17 IST
Last Updated 1 ಅಕ್ಟೋಬರ್ 2017, 9:17 IST

ಮೂಡುಬಿದಿರೆ: ಸ್ವರಾಜ್ಯ ಮೈದಾನ ದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾ ಣವಾಗುತ್ತಿರುವ ಪುರಸಭೆಯ ತಾತ್ಕಾಲಿಕ ಮಾರುಕಟ್ಟೆ ಕಾಮಗಾರಿಯನ್ನು ಶನಿವಾರ ಮಧ್ಯಾಹ್ನದಿಂದ ನಿಲ್ಲಿಸಲಾಗಿದೆ.

ಶನಿವಾರ ಕೋರ್ಟ್‌ ಆದೇಶ ಕೈ ಸೇರಿದ ಮೇರೆಗೆ ತಹಶೀಲ್ದಾರ್ ಮಹಮ್ಮದ್ ಇಸಾಕ್ ಅವರು ಪೊಲೀಸ ರೊಂದಿಗೆ ಶನಿವಾರ ಮಧ್ಯಾಹ್ನ ಸ್ವರಾಜ್ಯ ಮೈದಾನಕ್ಕೆ ತೆರಳಿ, ಕಾಮಗಾರಿಯನ್ನು ನಿಲ್ಲಿಸುವಂತೆ ಸೂಚನೆ ನೀಡಿದರು. ಇದರಿಂದ ಕಾಮಗಾರಿ ಸ್ಥಗಿತಗೊಂಡಿದೆ.

ಆರು ವಾರ ಯಥಾಸ್ಥಿತಿಗೆ ಆದೇಶ: ರಕ್ಷಣಾ ಇಲಾಖೆಗೆ ಸೇರಿದ ಸುಮಾರು 28 ಎಕರೆ ವಿಸ್ತೀರ್ಣದ ಸ್ವರಾಜ್ಯ ಮೈದಾನವನ್ನು ಕೇಂದ್ರ ಸರ್ಕಾರದ ಒಪ್ಪಿಗೆ ಪಡೆಯದೆ ಜಿಲ್ಲಾಧಿಕಾರಿ ಕ್ರೀಡಾ ಇಲಾಖೆಗೆ ಹಸ್ತಾಂತರಿಸಿದನ್ನು ಸುದರ್ಶನ್ ಎಂ., ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ADVERTISEMENT

ಈ ಕುರಿತು ಆದೇಶ ನೀಡಿರುವ ಹೈಕೋರ್ಟ್‌, 6 ವಾರಗಳವರೆಗೆ ಸ್ವರಾಜ್ಯ ಮೈದಾನದಲ್ಲಿ ಯಾವುದೇ ಕಾಮಗಾರಿ ಗಳನ್ನು ನಡೆಸದಂತೆ ಆದೇಶಿಸಿದ್ದು, ಅಲ್ಲಿಯವರೆಗೆ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.