ಮಂಗಳೂರು: ದುಬೈನಿಂದ ಶುಕ್ರವಾರ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಾರಾಷ್ಟ್ರದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು, ₹13.16 ಲಕ್ಷ ಮೌಲ್ಯದ 284 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಉಲ್ಲಾಸನಗರದ ವಿನೇಶ್ ರಾಜು ಅಡ್ವಾಣಿ ಬಂಧಿತ ವ್ಯಕ್ತಿ. ಸ್ಪೈಸ್ ಜೆಟ್ ವಿಮಾನದ ಮೂಲಕ ಬಂದಿಳಿದ ಈ ವ್ಯಕ್ತಿಯನ್ನು ತಪಾಸಣೆ ಮಾಡಿದಾಗ, ಚಿನ್ನದ ಪುಡಿಯನ್ನು ಅಂಟಿನೊಂದಿಗೆ ಮಿಶ್ರಣ ಮಾಡಿ, ಗುದದ್ವಾರದಲ್ಲಿ ಅಡಗಿಸಿ ಇಟ್ಟಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.