ಮಂಗಳೂರು: ನಗರದಲ್ಲಿ ಡ್ರಗ್ಸ್ ದಂಧೆಯ ವಿರುದ್ಧ ಕಠಿಣ ಕ್ರಮಕ್ಕೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮುಂದಾಗಿದ್ದು, ಬುಧವಾರ ಮೂವರನ್ನು ಬಂಧಿಸಿ 2.5 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಸಂತೋಷ್, ದಿಲೀಪ್ ನಾಗರಾವ್, ಇಮ್ರಾನ್ ಜುಬೇರ್ ಎಂಬುವವರನ್ನು ನಾರ್ಕೊಟಿಕ್ ಮತ್ತು ವಾಣಿಜ್ಯ ಅಪರಾಧ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಈ ಗಾಂಜಾವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸಲು ತಂದಿದ್ದರು ಎಂಬ ಮಾಹಿತಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.