ADVERTISEMENT

ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು, ₹4 ಲಕ್ಷ ಲೂಟಿ

ಪೆರ್ನೆ: ಹೆದ್ದಾರಿ ದರೋಡೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 4:40 IST
Last Updated 28 ಅಕ್ಟೋಬರ್ 2020, 4:40 IST
   

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಪೆರ್ನೆಯಲ್ಲಿ ಮಂಗಳವಾರ ರಾತ್ರಿ ಅಡಿಕೆ ವ್ಯಾಪಾರಿಪದೆಬರಿ ದೀಪಕ್ ಶೆಟ್ಟಿ ಅವರಿಗೆ ಚೂರಿಯಿಂದ ಇರಿದು ₹4 ಲಕ್ಷ ದೋಚಲಾಗಿದೆ.

ಇವರು ಪೆರ್ನೆಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, ರಾತ್ರಿ ಅಂಗಡಿ ಮುಚ್ಚಿ ಬೈಕಿನಲ್ಲಿ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ತಂಡವು ಕೃತ್ಯ ಎಸಗಿ ಪರಾರಿ ಆಗಿದೆ. ಚೂರಿಯಿಂದ ತಿವಿಯಲ್ಪಟ್ಟ ದೀಪಕ್ ಶೆಟ್ಟಿ ಸ್ಥಿತಿ ಗಂಭೀರವಾಗಿದೆ.

ದೀಪಕ್ ಶೆಟ್ಟಿ ತಲೆ ಹಾಗೂ ಹೊಟ್ಟೆಗೆ ಚೂರಿಯಿಂದ ತಿವಿದು, ಹಣವನ್ನು ದೋಚಿದ್ದು, ಖಚಿತ ಮಾಹಿತಿ ಹೊಂದಿದವರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ. ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.