ADVERTISEMENT

ಶೇ 50ರ ಪ್ರಮಾಣ ಮೀರದಂತೆ ಪ್ರಾರ್ಥನೆಗೆ ಅನುಮತಿ

ಬಕ್ರೀದ್ ಆಚರಣೆ: ಜಿಲ್ಲಾಡಳಿತದಿಂದ ಆದೇಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 16:02 IST
Last Updated 18 ಜುಲೈ 2021, 16:02 IST

ಮಂಗಳೂರು: ಕೋವಿಡ್‌ ನಿಯಂತ್ರಿಸುವ ಉದ್ದೇಶದಿಂದ ಇದೇ 21ರಂದು ನಡೆಯಲಿರುವ ಬಕ್ರೀದ್ ಹಬ್ಬದಂದು ಈದ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.ಆಯಾ ಮಸೀದಿ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ 50ರಷ್ಟು ಜನರು ಮೀರದಂತೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿದೆ.

ಒಂದೊಮ್ಮೆ ಅಧಿಕ ಜನರು ಬಂದಲ್ಲಿ ಪ್ರತ್ಯೇಕ ಬ್ಯಾಚ್‌ನಲ್ಲಿ ಮಾರ್ಗಸೂಚಿ ಅನುಸರಿಸಿ, ಆಯಾ ಮಸೀದಿಯಲ್ಲಿ ನಮಾಜ್ ನಿರ್ವಹಿಸಲು ಸಮ್ಮತಿ ಸೂಚಿಸಿದೆ. ಪ್ರಾಣಿವಧೆ ಮತ್ತು ಬಲಿದಾನ ಪ್ರಕ್ರಿಯೆಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ಪ್ರಾರ್ಥನಾ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.65 ವರ್ಷ ಮೇಲಿನವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿ ಪ್ರಾರ್ಥನೆ ಮಾಡಬೇಕು. ನಮಾಜ್ ನಿರ್ವಹಿಸುವವರ ನಡುವೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ರಸ್ತೆ, ಪಾದಚಾರಿ ಮಾರ್ಗ, ಆಸ್ಪತ್ರೆ, ಶಾಲೆ–ಕಾಲೇಜು ಆವರಣ, ಆಟದ ಮೈದಾನ, ಮಸೀದಿ, ಧಾರ್ಮಿಕ ಸ್ಥಳದ ಆವರಣ, ಉದ್ಯಾನ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿವಧೆ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT