ಮೂಲ್ಕಿ (ದಕ್ಷಿಣ ಕನ್ನಡ): ಬೊಳ್ಳೂರಿನ ಇಂದಿರಾನಗರದಲ್ಲಿ ಸಿಡಿಲಿನ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರಲ್ಲಿ ಒಬ್ಬ ಬಾಲಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾನೆ.
ಇಂದಿರಾನಗರದ ಬೊಳ್ಳೂರು ಮಸೀದಿ ಹಿಂಭಾಗದ ಖಾಸಗಿ ಜಮೀನಿನಲ್ಲಿ ಆಟವಾಡುತ್ತಿದ್ದ ಮನ್ಸೂರ್ ಎಂಬುವರ ಎರಡನೇ ಪುತ್ರ ನಿಹಾನ್ (5) ಮೃತಪಟ್ಟಿದ್ದಾನೆ. ಗಂಗಾವತಿ ಮೂಲದ ದುರ್ಗಪ್ಪ ಎಂಬುವವರ ಮಗ ಮಾರುತೇಶ್ (6) ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋಮಾ ಸ್ಥಿತಿಯಲ್ಲಿದ್ದಾನೆ ಎಂದು ತಿಳಿದು ಬಂದಿದೆ.
ಮಂಗಳವಾರ ಸಂಜೆ ಮನೆಯ ಹತ್ತಿರ ಆಟವಾಡುತ್ತಿದ್ದಾಗ ಸಿಡಿಲಿನ ಆಘಾತದಿಂದ ಮಕ್ಕಳು ಸ್ಥಳದಲ್ಲಿಯೇ ಪ್ರಜ್ಞಾಹೀನರಾಗಿದ್ದರು. ನಂತರ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.