ADVERTISEMENT

ದಾಯಾದಿ ಕಲಹ: ವಿಟ್ಲದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 7:43 IST
Last Updated 14 ಸೆಪ್ಟೆಂಬರ್ 2022, 7:43 IST
   

ವಿಟ್ಲ(ದಕ್ಷಿಣ ಕನ್ನಡ): ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಗಲಭೆ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಇಲ್ಲಿಗೆ ಸಮೀಪದ ಕೊಡಂಗೆ ಬನಾರಿಯಲ್ಲಿ ನಡೆದಿದೆ.

ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಕೊಲೆಯಾದವರು, ಪದ್ಮನಾಭ (49) ಕೊಲೆ ಆರೋಪಿ. ಕುಡಿದು ಮನೆಯಲ್ಲಿ ಆಗಿಂದಾಗ ಗಲಾಟೆ ಸಂಭವಿಸುತ್ತಿದ್ದು, ಒಂದು ತಿಂಗಳ ಹಿಂದೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಂಗಳವಾರ ರಾತ್ರಿಯೂ ಗಲಾಟೆ ನಡೆದಿದೆ ಎನ್ನಲಾಗಿದ್ದು, ಬುಧವಾರ ಕೊಲೆಯಾಗಿದ್ದ ಬಗ್ಗೆ ವಿಟ್ಲ ಠಾಣೆಗೆ ದೂರು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT