ADVERTISEMENT

ವಿಟ್ಲ: ಅಪಘಾತದಲ್ಲಿ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 7:30 IST
Last Updated 19 ಮಾರ್ಚ್ 2023, 7:30 IST
ಫೋಟೋ: ಅಪಘಾತಕ್ಕೀಡಾದ ವಾಹನ ಮತ್ತು ಮೃತಪಟ್ಟ ರಂಜಿತ್
ಫೋಟೋ: ಅಪಘಾತಕ್ಕೀಡಾದ ವಾಹನ ಮತ್ತು ಮೃತಪಟ್ಟ ರಂಜಿತ್   

ವಿಟ್ಲ: ಕಡೂರು-ಕಾಂಞಂಗಾಡು ಅಂತರರಾಜ್ಯ ಹೆದ್ದಾರಿಯ ಕಾಶಿಮಠದಲ್ಲಿ ಕೊಳವೆ ಬಾವಿ ಕೊರೆಯುವ ಯಂತ್ರ ಕೊಂಡೊಯ್ಯುತ್ತಿದ್ದ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಫಾತದಲ್ಲಿ ಸಹಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸವಾರ ಗಾಯಗೊಂಡಿದ್ದಾರೆ.

ಆಲಂಗಾರು ಬ್ರಾಣಪಾದೆ ನಿವಾಸಿ ರಂಜಿತ್(19) ಮೃತ ಯುವಕ. ದ್ವಿಚಕ್ರ ವಾಹನದಲ್ಲಿ ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದಾಗ ಕೊಳವೆ ಬಾವಿ ಕೊರೆಯುವ ಯಂತ್ರ ಕೊಂಡೊಯ್ಯುತ್ತಿದ್ದ ಲಾರಿಗೆ ಸಿಲುಕಿ ಹಾಕಿಕೊಂಡಿದ್ದು, ಕೆಲವು ಮೀಟರ್ ದೂರಕ್ಕೆ ಸಹಸವಾರನನ್ನು ಲಾರಿ ಎಳೆದೊಯ್ದಿದೆ. ತಲೆ ಸಂಪೂರ್ಣ ಛಿದ್ರವಾಗಿ ಹೋಗಿದೆ. ಸವಾರ ನಿತಿನ್(28) ಕಾಲಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT