ADVERTISEMENT

ಸುಲ್ಕೇರಿ: ಬೈಕ್ ಸ್ಕಿಡ್– ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 22 ಮೇ 2021, 13:33 IST
Last Updated 22 ಮೇ 2021, 13:33 IST
ಪ್ರಸಾದ್
ಪ್ರಸಾದ್   

ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಸುಲ್ಕೇರಿ ಜಂತಿಗೋಳಿ ನಿವಾಸಿ ಪ್ರಸಾದ್ (24) ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.

ಜಂತಿಗೋಳಿ ಅಣ್ಣಿ ಪೂಜಾರಿ ಮತ್ತು ಪುಷ್ಪಾ ದಂಪತಿಯ ಪುತ್ರನಾದ ಅವರು ಬೆಳ್ತಂಗಡಿಯ ಸ್ಟುಡಿಯೊ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮನೆ ಸಮೀಪ ಬೈಕ್ ಸ್ಕಿಡ್ ಆಗಿ, ಕಾಂಕ್ರೀಟ್ ರಸ್ತೆಗೆ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿತ್ತು. ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಾವನ್ನಪ್ಪಿದ್ದಾರೆ.

ಮೃತರಿಗೆ ತಂದೆ, ತಾಯಿ, ಸಹೋದರ, ಸಹೋದರಿ ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.