ಉಳ್ಳಾಲ (ದಕ್ಷಿಣ ಕನ್ನಡ): ಲಾರಿ ಡಿಕ್ಕಿ ಹೊಡೆದು ಕಾರ್ಮಿಕರೊಬ್ಬರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.
ಮೃತರನ್ನು ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯ ಕಾರ್ಮಿಕನಿಯಾಜ್ ಬಾವ (51) ಎಂದು ಗುರುತಿಸಲಾಗಿದೆ.ಅವರು ಮಾರುಕಟ್ಟೆಗೆ ಹೋಗುವ ಸಲುವಾಗಿ ರಸ್ತೆ ದಾಟುವ ವೇಳೆ ಕೇರಳ ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.