ADVERTISEMENT

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನಟ ಯಶ್ ಭೇಟಿ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2022, 8:10 IST
Last Updated 10 ಏಪ್ರಿಲ್ 2022, 8:10 IST
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಚಿತ್ರನಟ ಯಶ್ ಭೇಟಿ
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಚಿತ್ರನಟ ಯಶ್ ಭೇಟಿ    

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಚಿತ್ರ ನಟಯಶ್ ಭಾನುವಾರಭೇಟಿ ನೀಡಿದರು.

ಏ.14ರಂದು ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಕೆಜಿಎಫ್ 2 ಚಿತ್ರ ತಂಡದ ಜತೆಯಲ್ಲಿ ಯಶ್ ಕ್ಷೇತ್ರಕ್ಕೆ ಭೇಟಿ ನೀಡಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಿತ್ರತಂಡವನ್ನು ಸ್ವಾಗತಿಸಿದರು. ಯಶ್ ಹಾಗೂ ಸಂಗಡಿಗರು ಕ್ಷೇತ್ರದಲ್ಲಿ ದೇವರ ದರ್ಶನ ಪಡೆದು ಪ್ರಸಾರ ಸ್ವೀಕರಿಸಿದರು.

ADVERTISEMENT

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯೆ ಶೋಭಾ ಗಿರಿಧರ್, ಎಇಒ ಪುಷ್ಪಲತಾ, ಶಿಷ್ಟಾಚಾರ ಅಧಿಕಾರಿಗಳು ಉಪಸ್ಥಿತರಿದ್ದರು.

ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಜತೆ ಫೋಟೊ ತೆಗೆಯಲು ಮುಗಿಬಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.