ADVERTISEMENT

ಪ್ರಧಾನಿ ನರೇಂದ್ರ ಮೋದಿ ಆಯುಷ್ಯ ವೃದ್ಧಿಗೆ ಧರ್ಮಸ್ಥಳದಲ್ಲಿ ಮೃತ್ಯುಂಜಯ ಹೋಮ

​ಪ್ರಜಾವಾಣಿ ವಾರ್ತೆ
Published 17 ಜನವರಿ 2022, 13:50 IST
Last Updated 17 ಜನವರಿ 2022, 13:50 IST
ಪ್ರಧಾನಿ ನರೇಂದ್ರ ಮೋದಿ ಅವರ ಆಯುಷ್ಯ ವೃದ್ಧಿಗಾಗಿ ಧರ್ಮಸ್ಥಳದ ಅಮೃತಮರ್ಷಿಣಿ ಸಭಾಭವನದಲ್ಲಿ ಸೋಮವಾರ ಮೃತ್ಯುಂಜಯ ಹೋಮ ನಡೆಯಿತು.
ಪ್ರಧಾನಿ ನರೇಂದ್ರ ಮೋದಿ ಅವರ ಆಯುಷ್ಯ ವೃದ್ಧಿಗಾಗಿ ಧರ್ಮಸ್ಥಳದ ಅಮೃತಮರ್ಷಿಣಿ ಸಭಾಭವನದಲ್ಲಿ ಸೋಮವಾರ ಮೃತ್ಯುಂಜಯ ಹೋಮ ನಡೆಯಿತು.   

ಉಜಿರೆ: ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ ಮತ್ತು ಆಯುಷ್ಯ ವೃದ್ಧಿಗಾಗಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಸೋಮವಾರ ಮೃತ್ಯುಂಜಯ ಹೋಮ ನಡೆಯಿತು.

ಸುರತ್ಕಲ್‌ನ ನಾಗೇಂದ್ರ ಭಾರದ್ವಾಜ್ ಪ್ರಧಾನ ಪೌರೋಹಿತ್ಯದಲ್ಲಿ ಏಳು ಕುಂಡಗಳಲ್ಲಿ ನಡೆದ ಹೋಮದಲ್ಲಿ 108 ಅರ್ಚಕರು ಭಾಗವಹಿಸಿದರು. ‌ಬೆಳ್ತಂಗಡಿ ತಾಲ್ಲೂಕಿನ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ಮೃತ್ಯುಂಜಯ ಹೋಮ ಆಯೋಜಿಸಿದ್ದರು.

ಬೆಳಿಗ್ಗೆ ಆರಂಭವಾದ ಮೃತ್ಯುಂಜಯ ಹೋಮ, ಚತುರ್ವೇದ ಪಾರಾಯಣ, ಗೋಪೂಜೆ ಮತ್ತು ಮಹಾಗಣಪತಿ ಹೋಮದ ಬಳಿಕ ಮಧ್ಯಾಹ್ನ ಮಹಾಮಂಗಳಾರತಿ, ಪೂರ್ಣಾಹುತಿಯೊಂದಿಗೆ ಸಮಾಪನಗೊಂಡಿತು.

ADVERTISEMENT

ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ‘ಪ್ರಧಾನಿಯವರ ಆಯುಷ್ಯ ಮತ್ತು ಆರೋಗ್ಯ ವೃದ್ಧಿಯಾಗಿ, ಸಕಲ ಸನ್ಮಂಗಲ ಉಂಟಾಗಲಿ. ಶಾಸಕ ಹರೀಶ್ ಪೂಂಜ ಮತ್ತು ಡಾ.ಸ್ವೀಕೃತಿ ದಂಪತಿ ದೆಹಲಿಗೆ ತೆರಳಿ ನರೇಂದ್ರ ಮೋದಿ ಅವರಿಗೆ ಮೃತ್ಯುಂಜಯ ಹೋಮದ ಪ್ರಸಾದ ನೀಡಲಿದ್ದಾರೆ’ ಎಂದು ಹೇಳಿದರು.

ಸಚಿವರಾದ ಕೆ.ಎಸ್. ಈಶ್ವರಪ್ಪ, ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ್ ಮತ್ತು ಎಸ್.ಅಂಗಾರ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಧರ್ಮಸ್ಥಳದ ಹೇಮಾವತಿ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹಷೇಂದ್ರ ಕುಮಾರ್, ಶ್ರೇಯಸ್ ಕುಮಾರ್ ಮತ್ತು ನಿಶ್ಚಲ್ ಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.