ADVERTISEMENT

‘ಆಳ್ವಾಸ್ ನುಡಿಸಿರಿ’ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2021, 2:39 IST
Last Updated 4 ಡಿಸೆಂಬರ್ 2021, 2:39 IST

ಮೂಡುಬಿದಿರೆ: ಇದೇ 31ರಿಂದ ಜನವರಿ 2ರವರೆಗೆ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್‌ನಲ್ಲಿ ನಡೆಸಲು ಉದ್ದೇಶಿಸಿದ್ದ ‘ಆಳ್ವಾಸ್ ನುಡಿಸಿರಿ’ ಕನ್ನಡ ನಾಡು, ನುಡಿಯ ರಾಷ್ಟ್ರೀಯ ಸಮ್ಮೇಳನವನ್ನು ಮುಂದೂಡಲಾಗಿದೆ.

ಓಮೈಕ್ರಾನ್ ಸೋಂಕು ತಡೆಯುವ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ನಿರ್ಬಂಧ ಹಾಕಿರುವುದರಿಂದ ‘ನುಡಿಸಿರಿ’ಯನ್ನು ಮುಂದೂಡಲಾಗಿದೆ ಎಂದು ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT