ADVERTISEMENT

ಆಳ್ವಾಸ್ ವಿದ್ಯಾರ್ಥಿಸಿರಿ ಅಧ್ಯಕ್ಷತೆ: ಸನ್ನಿಧಿ ಟಿ ರೈ ಪೆರ್ಲ ಆಯ್ಕೆ 

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2018, 9:58 IST
Last Updated 1 ಅಕ್ಟೋಬರ್ 2018, 9:58 IST
  ಸನ್ನಿಧಿ ಟಿ ರೈ 
  ಸನ್ನಿಧಿ ಟಿ ರೈ    

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಇಲ್ಲಿಯ ವಿದ್ಯಾಗಿರಿಯಲ್ಲಿ ನವೆಂಬರ್ 15ರಂದು ನಡೆಯಲಿರುವ 'ಆಳ್ವಾಸ್ ವಿದ್ಯಾರ್ಥಿಸಿರಿ–2018' ಸಮ್ಮೇಳನದ ಅಧ್ಯಕ್ಷರಾಗಿ ಕಾಸರಗೋಡಿನ ಪ್ರೌಢಶಾಲಾ ವಿದ್ಯಾರ್ಥಿನಿ ಸನ್ನಿಧಿ ಟಿ.ರೈ ಪೆರ್ಲ ಆಯ್ಕೆಯಾಗಿದ್ದಾರೆ.

ಕವಿಗೋಷ್ಠಿಯ ಅಧ್ಯಕ್ಷತೆಗೆ ಬೆಳ್ತಂಗಡಿ ಉಜಿರೆಯ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭಾರ್ಗವಿ ಶಬರಾಯ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಅಧ್ಯಕ್ಷರಾದಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ನಡೆಯುವ ಸಂವಾದ ಗೋಷ್ಠಿಯ ಅಧ್ಯಕ್ಷತೆಗೆ ಉಜಿರೆ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶಾಮ್ ಪ್ರಸಾದ್ ಹಾಗೂ ಸಮಾರೋಪ ಭಾಷಣಕ್ಕೆ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ದೀಕ್ಷಿತ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.