ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 'ಆಳ್ವಾಸ್ ನುಡಿಸಿರಿ'ಗೆ ಪೂರಕವಾಗಿ ನಡೆಯುವ ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರ ಸಿರಿ ಮತ್ತು ವ್ಯಂಗ್ಯ ಚಿತ್ರ ಸಿರಿಯ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಮಂಗಳೂರಿನ ಗಣೇಶ್ ಸೋಮಯಾಜಿ ಆಳ್ವಾಸ್ ಚಿತ್ರಸಿರಿ ಪ್ರಶಸ್ತಿಗೆ, ಖ್ಯಾತ ವನ್ಯಜೀವಿ ಛಾಯಾಚಿತ್ರಗ್ರಾಹಕ ಎಸ್.ತಿಪ್ಪೇಸ್ವಾಮಿ ಆಳ್ವಾಸ್ ಛಾಯಾಚಿತ್ರಸಿರಿ ಪ್ರಶಸ್ತಿಗೆ ಹಾಗೂ ವ್ಯಂಗ್ಯಚಿತ್ರ ಪ್ರವೀಣರಾದ ಕೆ.ಆರ್.ಸ್ವಾಮಿ ಅವರನ್ನು ಆಳ್ವಾಸ್ ವ್ಯಂಗ್ಯಚಿತ್ರಸಿರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹25 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.
‘ಇದೇ 13ರಂದು ವಿದ್ಯಾಗಿರಿಯ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.