ADVERTISEMENT

ಮಂಗಳೂರು ವಿಶ್ವವಿದ್ಯಾಲಯ: ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 13:19 IST
Last Updated 6 ಡಿಸೆಂಬರ್ 2022, 13:19 IST
   

ಮಂಗಳೂರು: ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಂಗಣದಲ್ಲಿ ಪ್ರತಿಷ್ಠಾಪಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನುರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮಂಗಳವಾರ ಲೋಕಾರ್ಪಣೆ ಮಾಡಿದರು

ವಿಶ್ವವಿದ್ಯಾಲಯದ ವಿಜ್ಞಾನ ಬ್ಲಾಕ್ ಕಟ್ಟಡದ ಎದುರು ಪ್ರತಿಷ್ಠಾಪಿಸಲಾದ ಈ ಪ್ರತಿಮೆ 9 ಅಡಿ ಎತ್ತರವಿದೆ.

ಕಾರ್ಯಕ್ರಮದಲ್ಲಿ ಛತ್ತೀಸ್ ಗಡದ ತೋಟಗಾರಿಕೆ, ಅರಣ್ಯ ಹಾಗೂ ದುರ್ಗ ಮಹಾತ್ಮಾ ಗಾಂಧಿ ವಿಶ್ವವಿದ್ಯಾನಿಲಯ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸಮಾಜ ವಿಜ್ಞಾನ ಹಾಗೂ ಮಾಹೋ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಪತಿ ಫ್ರೊ ಆರ್.ಎಸ್. ಕುರೀಲ್, ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ. ಸುಬ್ರಮಣ್ಯ ಯಡಪಡಿತ್ತಾಯ, ಕುಲಸಚಿವ ಕಿಶೋರ್ ಕುಮಾರ್ ಸಿ.ಕೆ., ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹಾಗೂ ಇತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.