ADVERTISEMENT

ಯೋಧರ ಮಕ್ಕಳಿಗೆ ಉಚಿತ ಶಿಕ್ಷಣ: ಅಂಬಿಕಾ ಶಿಕ್ಷಣ ಸಂಸ್ಥೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 6:01 IST
Last Updated 17 ಜುಲೈ 2021, 6:01 IST
ನಟ್ಟೋಜ ಫೌಂಡೇಶನ್ ಟ್ರಸ್ಟ್ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಮೃತ ಯೋಧನ ಪತ್ನಿ ಸಂಗೀತಾ ಬೊಮ್ಮನಹಳ್ಳಿ ಅವರಿಗೆ ಉಚಿತ ಶಿಕ್ಷಣದ ಕೊಡುಗೆಯ ಅಧಿಕೃತ ಪತ್ರ ಹಸ್ತಾಂತರಿಸಿದರು.
ನಟ್ಟೋಜ ಫೌಂಡೇಶನ್ ಟ್ರಸ್ಟ್ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಮೃತ ಯೋಧನ ಪತ್ನಿ ಸಂಗೀತಾ ಬೊಮ್ಮನಹಳ್ಳಿ ಅವರಿಗೆ ಉಚಿತ ಶಿಕ್ಷಣದ ಕೊಡುಗೆಯ ಅಧಿಕೃತ ಪತ್ರ ಹಸ್ತಾಂತರಿಸಿದರು.   

ಪುತ್ತೂರು: ಇತ್ತೀಚೆಗೆ ಪುಲ್ವಾಮಾದಲ್ಲಿ ಮೂವರು ಉಗ್ರರನ್ನು ಹತ್ಯೆಗೈದು, ಪ್ರಾಣಾರ್ಪಣೆ ಮಾಡಿದ ವಿಜಯಪುರದ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದ ವೀರಯೋಧ ಕಾಶೀರಾಯ ಬೊಮ್ಮನಹಳ್ಳಿ ಅವರ ಮಕ್ಕಳಿಗೆ ಪದವಿ ಹಂತದವರೆಗೆ ಉಚಿತ ವಸತಿ ಹಾಗೂ ಶಿಕ್ಷಣ ನೀಡುವ ಬಗ್ಗೆ ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ನಿರ್ಣಯ ಕೈಗೊಂಡಿದೆ.

ಇತ್ತೀಚೆಗೆ ವಿಜಯಪುರದ ಕಾಶಿರಾಯ ಬೊಮ್ಮನಹಳ್ಳಿ ನಿವಾಸಕ್ಕೆ ಭೇಟಿ ನೀಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಮಾತೃಸಂಸ್ಥೆಯಾದ ನಟ್ಟೋಜ ಫೌಂಡೇಷನ್ ಟ್ರಸ್ಟ್ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಮೃತ ಯೋಧನ ಪತ್ನಿ ಸಂಗೀತಾ ಕಾಶೀರಾಯ ಬೊಮ್ಮನಹಳ್ಳಿ ಅವರೊಂದಿಗೆ ಮಾತುಕತೆ ನಡೆಸಿ ಉಚಿತ ಶಿಕ್ಷಣದ ಕೊಡುಗೆಯ ಅಧಿಕೃತ ಪತ್ರವನ್ನು ಹಸ್ತಾಂತರಿಸಿದರು. ಕಾಶಿರಾಯ ಅವರ ಪುತ್ರಿ ಪೃಥ್ವಿ ಪ್ರಸ್ತುತ ಎರಡನೇ ತರಗತಿ ಓದುತ್ತಿದ್ದು, ಪುತ್ರ ಭಗತ್ ಸಿಂಗ್ ಚಿಕ್ಕವನಾಗಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT