ADVERTISEMENT

11ರಂದು ಪುತ್ತೂರಿಗೆ ಅಮಿತ್‌ ಶಾ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2023, 18:33 IST
Last Updated 2 ಫೆಬ್ರುವರಿ 2023, 18:33 IST

ಮಂಗಳೂರು: ಕ್ಯಾಂಪ್ಕೊ ಸಂಸ್ಥೆಯ ಸುವರ್ಣಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ ಅವರು ಫೆ.11ರಂದು ಪುತ್ತೂರಿಗೆ ಭೇಟಿ ನೀಡಲಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ರನ್ ವೇ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ, ಶಾ ಅವರು ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುವರು. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಪುತ್ತೂರು ಸಮೀಪದ ಈಶ್ವರಮಂಗಲಕ್ಕೆ ಬರುವರು. ಮಧ್ಯಾಹ್ನ 1.30ರಿಂದ 2.30ರವರೆಗೆ ಈಶ್ವರಮಂಗಲದ ಭಾರತ್‍ ಮಾತಾ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಪಂಚಮುಖಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ, 2.35ಕ್ಕೆ ಹೆಲಿಕಾಪ್ಟರ್‌ ಮೂಲಕವೇ ಪುತ್ತೂರಿನ ಸೇಂಟ್‌ ಫಿಲೋಮಿನಾ ಕಾಲೇಜಿಗೆ ಬರುವರು.

ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ಮೈದಾನದಲ್ಲಿ ಸಂಜೆ 3.30ರಿಂದ ಸಮಾವೇಶ ನಡೆಯಲಿದ್ದು, ಅಲ್ಲಿ ಕ್ಯಾಂಪ್ಕೊ ಸುವರ್ಣ ಮಹೋತ್ಸವಕ್ಕೆ ಚಾಲನೆ, ವಿವಿಧ ಉತ್ಪನ್ನಗಳ ಉದ್ಘಾಟನೆ, ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಚಾಕೊಲೇಟ್ ಫ್ಯಾಕ್ಟರಿಗೆ ಭೇಟಿ ನೀಡುವರು. 5.30ಕ್ಕೆ ಹೆಲಿಕಾಪ್ಟರ್ ಮೂಲಕ ಕಣ್ಣೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.