ಸುಬ್ರಹ್ಮಣ್ಯ: ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಶುಕ್ರವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಮಧ್ಯಾಹ್ನದ ಮಹಾಪೂಜೆಯಲ್ಲಿ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿ ದೇವರ ದರ್ಶನ ಪಡೆದರು.
ಅಣ್ಣಾಮಲೈ ಅವರಿಗೆ ದೇವಳದ ಪ್ರಧಾನ ಅರ್ಚಕರು ಶಾಲು ಹೊದಿಸಿ ದೇವರ ಪ್ರಸಾದ ನೀಡಿ ಹರಸಿದರು. ಬಳಿಕ ಆದಿಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ಬೆಳ್ಳಿಯ ಹರಕೆಯನ್ನು ಸಮರ್ಪಿಸಿದರು.
ದೇವಳದ ಆಡಳಿತ ಮಂಡಳಿ ಸದಸ್ಯ ಶ್ರೀವತ್ಸ, ಶೋಭಾ ಗಿರಿಧರ್, ಬಿಜೆಪಿ ಗ್ರಾಮ ಸಮಿತಿಯ ದಿನೇಶ್ ಸಂಪ್ಯಾಡಿ, ಅಶೋಕ್ ಆಚಾರ್ಯ, ಚಿದಾನಂದ ಕಂದಡ್ಕ, ಶ್ರೀಕುಮಾರ್ ಬಿಲದ್ವಾರ, ರಾಜೇಶ್ ಎನ್.ಎಸ್. ಇದ್ದರು. ಕಚೇರಿಗೆ ಬಂದ ಅಣ್ಣಾಮಲೈ ಅವರನ್ನು ಸುಬ್ರಹ್ಮಣ್ಯ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಗೌರವಿಸಲಾಯಿತು. ಅಣ್ಣಾಮಲೈ ಅವರನ್ನು ನೋಡಿ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.