ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಮತ್ತೊಂದು ವಾರ ಲಾಕ್‌ಡೌನ್ ವಿಸ್ತರಣೆ: ಸಚಿವ ಕೋಟ

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 10:12 IST
Last Updated 10 ಜೂನ್ 2021, 10:12 IST
 ಸಚಿವ ಕೋಟ ಶ್ರೀನಿವಾಸ ಪೂಜಾರಿ
ಸಚಿವ ಕೋಟ ಶ್ರೀನಿವಾಸ ಪೂಜಾರಿ    

ಮಂಗಳೂರು: ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕ್‌ಡೌನ್ಗೆ ಮುಂದುವರಿಸಲು ತೀರ್ಮಾನ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

ಕೆಲ ಕೈಗಾರಿಕೆ ಹೊರತುಪಡಿಸಿ ಜಿಲ್ಲೆಯಲ್ಲಿ ಒಂದು ವಾರ ಲಾಕ್‌ಡೌನ್‌ ಮುಂದುವರೆಸಲುಮುಖ್ಯಮಂತ್ರಿಗೆಮನವಿ ಮಾಡಿದ್ದೆವು. ಇದಕ್ಕೆ ಸಭೆಯಲ್ಲಿ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಮತ್ತೆ ಒಂದು ವಾರ ದಕ್ಷಿಣ ಕನ್ನಡ ಜಿಲ್ಲೆ ಲಾಕ್‌ಡೌನ್ ಮುಂದುವರಿಯಲಿದೆ ಎಂದರು.

ಕೆಲ ವಿಷಯಗಳಿಗೆ ರಿಯಾಯಿತಿ ನೀಡುವ ಸಂಬಂಧ ಶುಕ್ರವಾರ ಸಂಸದರು, ಶಾಸಕರ ಸಭೆ ನಡೆಸಲಾಗುವುದು. ಕೂಲಿ ಮಾಡುವವರು ಮತ್ತು ಕೈಗಾರಿಕಾ ಕಾರ್ಮಿಕರಿಗೆ‌ ನೆರವಾಗುವ ನಿಟ್ಟಿನಲ್ಲಿ ಕೆಲವೊಂದು ಸಡಿಲಿಕೆ ಮಾಡಲಾಗುವುದು. ಆ ಬಗ್ಗೆ ‌ಶುಕ್ರವಾರದ ಸಭೆಯಲ್ಲಿ‌ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.