ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ವಿವಿಧ ಅಕಾಡೆಮಿಗಳ ಖಾಲಿ ಇರುವ ಮತ್ತು ತೆರವಾಗಿರುವ ಸ್ಥಾನಗಳಿಗೆ ಸರ್ಕಾರ ಹೊಸಬರನ್ನು ನೇಮಕ ಮಾಡಿದೆ.
ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಓಂಗಣೇಶ್ ಕುಂದಾಪುರ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಉಡುಪಿ ಜಿಲ್ಲೆಯ ಅಬ್ದುಲ್ ರಹಿಮಾನ್ ಮಣಿಪಾಲ, ಮಹಮ್ಮದ್ ಮುಸ್ತಫಾ, ದಕ್ಷಿಣ ಕನ್ನಡ ಜಿಲ್ಲೆಯ ಹೈದರಾಲಿ ಬಿ.ಸಿ.ರೋಡ್, ಎಂ.ಕೆ.ಮಠ ಉಪ್ಪಿನಂಗಡಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಡಾ. ಕೇಶವ ಬಂಗೇರ ಮಂಗಳೂರು, ರಂಗ ಸಮಾಜದ ಸದಸ್ಯರಾಗಿ ಡಾ. ಶೀನ ನಡೋಳಿ ಅವರನ್ನು ನೇಮಕ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.