ಮಂಗಳೂರು:ನಗರದ ಪಂಪ್ ವೆಲ್ ವೃತ್ತಕ್ಕೆ 'ಸಾವರ್ಕರ್' ಹೆಸರು ಎಂದು ಬ್ಯಾನರ್ ಹಾಕುವ ಮೂಲಕ ಕಿಡಿಗೇಡಿಗಳು ನಾಡಿಗೆ ಅವಮಾನ ಮಾಡಿದ್ದಾರೆ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದ್ದಾರೆ.
ನಗರದ ಪಂಪ್ ವೆಲ್ ವೃತ್ತಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ 'ಮಹಾವೀರ' ವೃತ್ತ ಎಂದು ನಾಮಕರಣ ಮಾಡಲಾಗಿದೆ. ಈ ವೃತ್ತಕ್ಕೆ 'ಸಾವರ್ಕರ್' ಹೆಸರು ಎಂದು ಬ್ಯಾನರ್ ಹಾಕುವ ಮೂಲಕ ಕಿಡಿಗೇಡಿಗಳು ನಾಡಿಗೆ ಅವಮಾನ ಮಾಡಿದ್ದಾರೆ. ಈ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು. ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡಿದ ಮುಖಂಡರು, ಸಂಘಟನೆ, ಬ್ಯಾನರ್ ಮುದ್ರಿಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದರು.
'ಕಿಡಿಗೇಡಿಗಳನ್ನು ಬಂಧಿಸಲು ಕ್ರಮಕೈಗೊಳ್ಳದಿದ್ದರೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರೂ ಈ ಕುಮ್ಮಕ್ಕಿನಲ್ಲಿ ಭಾಗೀದಾರರು ಎಂದು ಭಾವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.