ADVERTISEMENT

ಇನ್ಶೂರನ್ಸ್‌ ಕಂಪನಿ ಉದ್ಯೋಗಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 16:40 IST
Last Updated 6 ಮಾರ್ಚ್ 2023, 16:40 IST
ಅಶಿತ್‌ ಕುಮಾರ್‌
ಅಶಿತ್‌ ಕುಮಾರ್‌   

ಮೂಡುಬಿದಿರೆ: ಬೆಳ್ತಂಗಡಿ ಕಾಶಿಪಟ್ಣ ನಿವಾಸಿ ಆಶಿತ್ ಕುಮಾರ್ (51) ಗುರುಪುರ ನದಿಗೆ ಹಾರಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಮಂಗಳೂರಿನ ಖಾಸಗಿ ಇನ್ಸೂರೆನ್ಸ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಆಶಿತ್‌ ಇತ್ತೀಚಿನ ದಿನಗಳಲ್ಲಿ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದರು. ಆತ್ಮಹತ್ಯೆಗೆ ಇದೇ ಕಾರಣವಿರಬಹುದು’ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಳ್ತಂಗಡಿ ಕೇಳದ ಪೇಟೆ ಬಸದಿ ಜೀರ್ಣೋದ್ಧಾರಕ್ಕೆ ಶ್ರಮಿಸಿದ್ದ ಅವರು ಜೆಸಿಐ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಜೆಸಿಐ ವಲಯ 15ರ ಅಧ್ಯಕ್ಷ ಹಾಗೂ ವಲಯಾಧಿಕಾರಿಯಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಮೂಡುಬಿದಿರೆಯಲ್ಲಿ ಮಹಾವೀರ ಎಲೆಕ್ಟ್ರಾನಿಕ್ಸ್ ಅಂಗಡಿ ಆರಂಭಿಸಿದ್ದರು. ಬಳಿಕ ಮಂಗಳೂರಿಗೆ ಸ್ಥಳಾಂತರಗೊಂಡಿದ್ದ ಅವರು ಇನ್ಸೂರೆನ್ಸ್ ಕಂಪೆನಿಯಲ್ಲಿ ಉದ್ಯೋಗಕ್ಕೆ ಸೇರಿ ಅಲ್ಲೇ ನೆಲೆಸಿದ್ದರು. ಕೊಂಡಿದ್ದರು. ಅವರಿಗೆ ಪತ್ನಿ ಹಾಗೂ ಒಬ್ಬ ಪುತ್ರ ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.