ADVERTISEMENT

ಫೋಟೊಗ್ರಾಫರ್ ಮೇಲೆ ತಲವಾರಿನಿಂದ ಹಲ್ಲೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 16:58 IST
Last Updated 28 ಅಕ್ಟೋಬರ್ 2020, 16:58 IST
ಫೋಟೊಗ್ರಾಫರ್ ದಿನೇಶ್ ಶೆಟ್ಟಿ
ಫೋಟೊಗ್ರಾಫರ್ ದಿನೇಶ್ ಶೆಟ್ಟಿ   

ಬಂಟ್ವಾಳ: ಬಿಜೆಪಿಯ ಪುದು ಶಕ್ತಿ ಕೇಂದ್ರದ ಸಾಮಾಜಿಕ ಜಾಲತಾಣ ಸಂಚಾಲಕ ದಿನೇಶ್ ಶೆಟ್ಟಿ ಕೊಟ್ಟಿಂಜ ಅವರ ಫರಂಗಿಪೇಟೆಯಲ್ಲಿನ ಸ್ಟುಡಿಯೊಗೆ ಬುಧವಾರ ಸಂಜೆ ನುಗಿದ್ದ ದುಷ್ಕರ್ಮಿಗಳು, ತಲವಾರಿನಿಂದ ಹಲ್ಲೆ ನಡೆಸಿದ್ದಾರೆ.

ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ದಿನೇಶ್, ಫರಂಗಿಪೇಟೆಯಲ್ಲಿರಾಷ್ಟ್ರೀಯ ಹೆದ್ದಾರಿ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸ್ಟುಡಿಯೊ ಹೊಂದಿದ್ದಾರೆ. ಅಲ್ಲಿಗೆ ರಾತ್ರಿ 8 ಗಂಟೆ ಸುಮಾರಿಗೆ ನುಗ್ಗಿದ ದುಷ್ಕರ್ಮಿಗಳ ತಂಡವು ದಾಳಿ ನಡೆಸಿ ಪರಾರಿಯಾಗಿದೆ. ಅವರ ತಲೆ, ಹೊಟ್ಟೆ ಮತ್ತಿತರ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೆ ನಿಖರ ಕಾರಣವು ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ಇನ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್, ಸಬ್‌ಇನ್‌ಸ್ಪೆಕ್ಟರ್‌ಗಳಾದ ಪ್ರಸನ್ನ, ಅವಿನಾಶ್ ಗೌಡ ಭೇಟಿ ನೀಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.