ವಿಟ್ಲ (ದಕ್ಷಿಣ ಕನ್ನಡ ಜಿಲ್ಲೆ): ಇಲ್ಲಿನ ಸಾಲೆತ್ತೂರು ಕೊಡಂಗೆ ಚೆಕ್ಪೋಸ್ಟ್ನಲ್ಲಿ ಶುಕ್ರವಾರ ನಸುಕಿನಲ್ಲಿ ಕೇರಳದ ‘ಡಿ ಗ್ಯಾಂಗ್’ ತಂಡವು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಅಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ನೆರೆಯ ಕೇರಳದ ಉಪ್ಪಳದಲ್ಲಿ ಬಾರ್ನಲ್ಲಿ ಗಲಾಟೆ ಮಾಡಿ, ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗುತ್ತಿದ್ದ ‘ಡಿ ಗ್ಯಾಂಗ್’ ತಂಡವನ್ನು ವಿಟ್ಲ ಠಾಣೆಯ ಪೊಲೀಸರು ಚೆಕ್ಪೋಸ್ಟ್ನಲ್ಲಿ ತಡೆಯಲು ಮುಂದಾದಾಗ ಗುಂಡಿನ ದಾಳಿ ನಡೆಸಿದೆ.
ಗ್ಯಾಂಗ್ನ ಸದಸ್ಯರಾದ ಕಾಸರಗೋಡಿನ ಮಂಗಲ್ಪಾಡಿಯ ಅಬ್ದುಲ್ ಲತೀಫ್ (26), ಮೀಯಪದವಿನ ಶಾಕೀರ್ (23) ಮತ್ತು ಅಡ್ಕಂತಗುರಿ ನಿವಾಸಿ ಅಶ್ಪಾಕ್ (25) ಬಂಧಿತರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.