ಕಾಸರಗೋಡು: ಅಕ್ರಮ ಮರಳು ಸಾಗಾಟ ತಡೆಯಲು ಯತ್ನಿಸಿದ ಬೇಕಲ ಠಾಣೆ ಎಸ್ಐ ರಾಜೇಶ್ ಎಂ. ಅವರಿಗೆ ವಾಹನ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ ಆರೋಪಿ ಪೂಚಕ್ಕಾಡ್ ನಿವಾಸಿ ಪಿ.ಅಬ್ದುಲ್ ಜಲೀಲ್(39) ಎಂಬಾತನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿದೆ. 2014 ಫೆ.2ರಂದು ರಾತ್ರಿ ಕಲ್ಲಿಂಗಾಲ್ ಎಂಬಲ್ಲಿ ಘಟನೆ ನಡೆದಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.