ಮಂಗಳೂರು: ನಗರದ ಬೋಳೂರಿನ ಬಿ.ಎಂ. ರವೀಂದ್ರ ಆಚಾರ್ಯ (72) ಸೋಮವಾರ ರಾತ್ರಿ ನಿಧನರಾದರು.
ಸುದೀರ್ಘ 26 ವರ್ಷಗಳ ಕಾಲ ಮಂಗಳೂರಿನ ಎಸ್. ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿದ್ದರು. ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮಂಡಳಿ, ಕಾಳಿಕಾಂಬಾ ಸೇವಾ ಸಮಿತಿ, ದ.ಕ. ಜಿಲ್ಲಾ ಚಿನ್ನದ ಕೆಲಸಗಾರರ ಸಂಘ, ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾದಲ್ಲಿ ಸಕ್ರಿಯರಾಗಿದ್ದರು. ಅವರಿಗೆ ಪತ್ನಿ, ಪುತ್ರ ಇದ್ದಾರೆ.
ಬಿ. ದೇವದಾಸ್ ಕಾಮತ್ ನಿಧನ
ಮಂಗಳೂರುನಗರದ ಲಾಲ್ಭಾಗ್ನ ಕೇಶವ್ ಅಪಾರ್ಟ್ಮೆಂಟ್ ನಿವಾಸಿ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಮುಖ್ಯ ವ್ಯವಸ್ಥಾಪಕ ಬಿ. ದೇವದಾಸ್ ಕಾಮತ್ (63) ಸೋಮವಾರ ನಿಧನರಾದರು.
ಇವರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಂಬೈ, ಗುರ್ಗಾಂವ್, ಬೆಂಗಳೂರು ಹಾಗೂ ಮಂಗಳೂರು ಶಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.
ಸತ್ಯಾನಾರಾಯಣ ಎ.ಎಸ್. ನಿಧನ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಏನೆಕಲ್ಲು ನಿವಾಸಿ ಸುಬ್ರಾಯ ಅಸ್ರಣ್ಣರ ಪುತ್ರ ಸತ್ಯನಾರಾಯಣ ಎ.ಎಸ್ (59) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಇವರು ಸುಬ್ರಹ್ಮಣ್ಯ ದೇವಸ್ಥಾನದ ನಿವೃತ್ತ ಶಿಷ್ಟಾಚಾರ ಅಧಿಕಾರಿ ಎ.ವಿ.ರಾಜ್ ಹಾಗೂ ಏನೆಕಲ್ಲು ಪ್ರಾಥಮಿಕ ಪತ್ತಿನ ಸಹಕಾರಿ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಎ.ಎಸ್ ಅವರ ಸಹೋದರ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.