ಸುಳ್ಯ (ದಕ್ಷಿಣ ಕನ್ನಡ): ಆನೆಗಳ ಗುಂಪುನಿಂದ ಬೇರ್ಪಟ್ಟು ತಾಲ್ಲೂಕಿನ ಮಂಡೆಕೋಲು ಜನವಸತಿ ಪ್ರದೇಶದಲ್ಲಿ ಒಂಟಿಯಾಗಿ ಉಳಿದುಕೊಂಡಿದ್ದ ಮರಿಯೊಂದನ್ನು ಗ್ರಾಮಸ್ಥರು ಕಟ್ಟಿ ಹಾಕಿದ್ದಾರೆ.
ಶುಕ್ರವಾರ ಬೆಳಿಗ್ಗೆ ಈ ಮರಿ ಆನೆ ಮಂಡೆಕೋಲಿನ ಕನ್ಯಾನ ಎಂಬಲ್ಲಿ ಇರುವುದು ಪತ್ತೆಯಾಗಿದೆ. ರಾತ್ರಿ ವೇಳೆ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಗುಂಪಿನಿಂದ ಇದು ತಪ್ಪಿಸಿಕೊಂಡು ಬೇರ್ಪಟ್ಟಿರಬಹುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಮರಿ ಆನೆಯನ್ನು ಆನೆಗಳ ಗುಂಪಿನೊಂದಿಗೆ ಸೇರಿಸಲು ಅರಣ್ಯ ಇಲಾಖೆಯವರು ಮುಂದಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.