ADVERTISEMENT

ರಾಜಕೇಸರಿಯಿಂದ ಮೂರು ಶಾಲೆಗಳ ವಿದ್ಯಾರ್ಥಿಗಳಿಗೆ ಬ್ಯಾಗ್, ಪುಸ್ತಕ ವಿತರಣೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2025, 14:31 IST
Last Updated 29 ಜೂನ್ 2025, 14:31 IST
ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲ್ಲೂಕು ವತಿಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸಪಟ್ಣ ಬಜಿರೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಿಸಲಾಯಿತು
ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲ್ಲೂಕು ವತಿಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸಪಟ್ಣ ಬಜಿರೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಿಸಲಾಯಿತು   

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ದೀಪಕ್ ಜಿ.ಬೆಳ್ತಂಗಡಿ ನೇತೃತ್ವದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನೀರಚಿಲುಮೆ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಾವರ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸಪಟ್ಣ ಬಜಿರೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಿಸಲಾಯಿತು.

ಬಜಿರೆ ಹೊಸಪಟ್ಣ ಶಾಲೆಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೊಸಂಗಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಮಾತನಾಡಿ, ‘ನಾವು ಮೊದಲು ನಮ್ಮ ಪರಿಸರದ ಸರ್ಕಾರಿ ಶಾಲೆಯನ್ನು ಪ್ರೀತಿಸಬೇಕು. ಸರ್ಕಾರಿ ಶಾಲೆ ಉಳಿಸಲು ಶ್ರಮಿಸುತ್ತಿರುವ ರಾಜ ಕೇಸರಿ ಸಂಘಟನೆ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸಪಟ್ಣ ಬಜಿರೆಯ ಎಸ್‌ಡಿಎಂಸಿ ಅಧ್ಯಕ್ಷ ದಯಾನಂದ ಪೂಜಾರಿ, ಗ್ರಾಮ ಪಂಚಾಯಿತಿ ಸದಸ್ಯರಾದ ಸುನಿಲ್, ಪ್ರವೀಣ್ ಪೂಜಾರಿ ಜಾರಿಗೆದಡಿ, ತಾಯಂದಿರ ಸಮಿತಿ ಅಧ್ಯಕ್ಷೆ ಸುಮಿತ್ರ, ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ.ಬೆಳ್ತಂಗಡಿ, ಅಧ್ಯಕ್ಷ ಸತೀಶ್ ಕಂಗಿತ್ತಿಲ್, ಸಂಚಾಲಕ ಜಗದೀಶ್ ಲಾಯಿಲ, ಸಹ ಸಂಚಾಲಕ ಶರತ್ ಕರಾಯ, ಸಂಘಟನಾ ಕಾರ್ಯದರ್ಶಿ ವಿನೋದ್ ಲಾಯಿಲ, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್, ವಿದ್ಯಾರ್ಥಿ ಪ್ರಮುಖ ಸಂದೇಶ್ ಭಾಗವಹಿಸಿದ್ದರು.

ADVERTISEMENT

ಮುಖ್ಯ ಶಿಕ್ಷಕಿ ವಿದ್ಯಾ ಕೆ.ಸ್ವಾಗತಿಸಿ, ಸಹ ಶಿಕ್ಷಕಿ ಭವ್ಯ ಕಾರ್ಯಕ್ರಮ ನಿರೂಪಿಸಿದರು.

ಹೂಸಪಟ್ಣದ ಅಂಗನವಾಡಿಗೆ ಭೇಟಿ ನೀಡಿ ಮಕ್ಕಳಿಗೆ ಸಿಹಿ ಹಂಚಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.