ಬಜಪೆ: ಖಾಸಗಿ ಕಂಪನಿಯೊಂದರ 5ಜಿ ನೆಟ್ವರ್ಕ್ಗಾಗಿ ಹೆದ್ದಾರಿಯ ಅಂಚಿನಲ್ಲಿ ಹೊಂಡ ಮಾಡಿದ್ದು, ವಾರ ಕಳೆದರೂ ಅದನ್ನು ಮುಚ್ಚಿಲ್ಲ. ಇದರಿಂದ ಪಾದಚಾರಿಗಳಿಗೆ, ವಾಹನ ಸಂಚಾರಕ್ಕೆ ತೊಡಕಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಕಟೀಲು- ಬಜಪೆ ರಾಜ್ಯ ಹೆದ್ದಾರಿಯ ಎಕ್ಕಾರು ಶಾಲೆ ಆವರಣ ಗೋಡೆ ಬಳಿಯಲ್ಲೇ ಹೊಂಡ ಮಾಡಲಾಗಿದ್ದು, ಇದರಿಂದಾಗಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಹೊಂಡದ ಸಮೀಪವೇ ಶಾಲೆಯ ಪ್ರವೇಶ ದ್ವಾರವಿದ್ದು ಮಕ್ಕಳಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರು ಕೂಡಲೇ ಹೊಂಡ ಮುಚ್ಚಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.