ADVERTISEMENT

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವರ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 16:03 IST
Last Updated 28 ಜುಲೈ 2022, 16:03 IST
ಪ್ರವೀಣ್ ನೆಟ್ಟಾರು
ಪ್ರವೀಣ್ ನೆಟ್ಟಾರು   

ಮಂಗಳೂರು: ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರದಲ್ಲಿ ಹಲವರನ್ನು ವಶಕ್ಕೆ ಪಡೆದ ಪೊಲೀಸರು, ವಿಚಾರಣೆಗೆ ಒಳಪಡಿಸಿದ್ದಾರೆ.

ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ ಜಿಲ್ಲಾ ಪೊಲೀಸರ ಸಹಭಾಗಿತ್ವದಲ್ಲಿ, ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರು ಹಾಗೂ ತನಿಖೆಗೊಳಪಡಿಸಬೇಕಾದ ವ್ಯಕ್ತಿಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ ಸುಮಾರು 27 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT