ADVERTISEMENT

ಚುನಾವಣೆ ಘೋಷಣೆ; ರಸ್ತೆ ದುರಸ್ತಿಗೆ ಆಗ್ರಹಿಸಿ ಬ್ಯಾನರ್‌

ನಾಗರಿಕರ ಹೋರಾಟ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2019, 4:40 IST
Last Updated 22 ಅಕ್ಟೋಬರ್ 2019, 4:40 IST
ರಸ್ತೆ ದುರಸ್ತಿಗೆ ಆಗ್ರಹಿಸಿ ಮೇರಿಹಿಲ್‌ ಬಳಿ ಸಾರ್ವಜನಿಕರು ಕಟ್ಟಿರುವ ಬ್ಯಾನರ್‌.
ರಸ್ತೆ ದುರಸ್ತಿಗೆ ಆಗ್ರಹಿಸಿ ಮೇರಿಹಿಲ್‌ ಬಳಿ ಸಾರ್ವಜನಿಕರು ಕಟ್ಟಿರುವ ಬ್ಯಾನರ್‌.   

ಮಂಗಳೂರು: ರಾಜ್ಯ ಚುನಾವಣಾ ಆಯೋಗ ಮಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ಘೋಷಿಸಿ, ನೀತಿಸಂಹಿತೆ ಜಾರಿಮಾಡಿದ ಬೆನ್ನಲ್ಲೇ ರಸ್ತೆ ದುರಸ್ತಿಗೆ ಆಗ್ರಹಿಸಿ ನಾಗರಿಕರು ಬ್ಯಾನರ್‌ಗಳನ್ನು ಹಾಕಲಾರಂಭಿಸಿದ್ದಾರೆ.

‘ಅಲ್ಲಿನ ಮೌಂಟ್‌ ಕಾರ್ಮೆಲ್‌ನಿಂದ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದವರೆಗಿನ ರಸ್ತೆಯ ದುಸ್ಥಿತಿಯನ್ನು ಬಣ್ಣಿಸಲಾಗಿದೆ.

‘ಮತ ಕೇಳಲು ಬರುವ ರಾಜಕೀಯ ಪಕ್ಷಗಳ ಕಾರ್ಯಕರ್ತರೇ, ಅಭ್ಯರ್ಥಿಗಳೇ ಮೊದಲು ರಸ್ತೆ ಸರಿಪಡಿಸಿ ಬನ್ನಿ. ನಿಮಗೆ ಸರ್ಕಾರಿ ಸೌಲಭ್ಯ ದೊರಕಿಸಿಕೊಡಲು ನಮ್ಮ ಅಮೂಲ್ಯವಾದ ಮತ ನೀಡುತ್ತಿಲ್ಲ. ಮತ ಬೇಕಾದರೆ ಅಭಿವೃದ್ಧಿ ತೋರಿಸಿ’ ಎಂದು ಬ್ಯಾನರ್‌ನಲ್ಲಿ ಆಗ್ರಹಿಸಲಾಗಿದೆ.

ADVERTISEMENT

‘ಪ್ರಧಾನಿ, ಮುಖ್ಯಮಂತ್ರಿ ಬರುವಾಗ ಯಾವ ಹೆದರಿಕೆ, ಭಯ, ಭಕ್ತಿ, ಶ್ರದ್ಧೆಯಿಂದ ರಸ್ತೆ ಡಾಂಬರೀಕರಣ ಮಾಡುತ್ತೀರೋ ಅದೇ ನಿಷ್ಠೆಯನ್ನು ನಿಮಗೆ ಮತ ನೀಡುವ ಪ್ರಜೆಗಳಿಗೆ ಮೊದಲು ತೋರಿಸಿ. ಇಲ್ಲವಾದರೆ ನಿಮಗೆ ನಮ್ಮ ಮತ ಖಂಡಿತ ಸಿಗುವುದಿಲ್ಲ’ ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.