ಬಂಟ್ವಾಳ: ಇಲ್ಲಿನ ಪುರಸಭೆ ಆರೋಗ್ಯಾಧಿಕಾರಿ ರವಿಕೃಷ್ಣ ಪುಣಚ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಪುರಸಭೆಯಲ್ಲಿ ಗುರುವಾರ ನಡೆದ ಪ್ರಥಮ ಸಾಮಾನ್ಯ ಸಭೆಯಲ್ಲಿ ತ್ಯಾಜ್ಯ ಸಮಸ್ಯೆಗೆ ಉತ್ತರಿಸಬೇಕಿದ್ದ ಅವರು, ಗೈರಾಗಿದ್ದರು. ಇದೇ ವೇಳೆ ಅವರನ್ನು ಕರೆ ಮಾಡಿ ವಿಚಾರಿಸಿದಾಗ ಪುರಸಭೆ ಅಧ್ಯಕ್ಷರಿಗೆ ಈ ಮಾಹಿತಿ ತಿಳಿದು ಬಂದಿದೆ. ಇಲ್ಲಿನ ಪುರಸಭೆಗೆ ಸುಳ್ಯದಿಂದ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ವರ್ಗವಾಗಿ ಬಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.