ADVERTISEMENT

ಬಂಟ್ವಾಳ: ಪುರಸಭೆ ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 5:25 IST
Last Updated 11 ಡಿಸೆಂಬರ್ 2020, 5:25 IST

ಬಂಟ್ವಾಳ: ಇಲ್ಲಿನ ಪುರಸಭೆ ಆರೋಗ್ಯಾಧಿಕಾರಿ ರವಿಕೃಷ್ಣ ಪುಣಚ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಪುರಸಭೆಯಲ್ಲಿ ಗುರುವಾರ ನಡೆದ ಪ್ರಥಮ ಸಾಮಾನ್ಯ ಸಭೆಯಲ್ಲಿ ತ್ಯಾಜ್ಯ ಸಮಸ್ಯೆಗೆ ಉತ್ತರಿಸಬೇಕಿದ್ದ ಅವರು, ಗೈರಾಗಿದ್ದರು. ಇದೇ ವೇಳೆ ಅವರನ್ನು ಕರೆ ಮಾಡಿ ವಿಚಾರಿಸಿದಾಗ ಪುರಸಭೆ ಅಧ್ಯಕ್ಷರಿಗೆ ಈ ಮಾಹಿತಿ ತಿಳಿದು ಬಂದಿದೆ. ಇಲ್ಲಿನ ಪುರಸಭೆಗೆ ಸುಳ್ಯದಿಂದ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ವರ್ಗವಾಗಿ ಬಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT