ADVERTISEMENT

ಬಂಟ್ವಾಳ: ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 5:01 IST
Last Updated 22 ಡಿಸೆಂಬರ್ 2025, 5:01 IST
ಬಂಟ್ವಾಳ ತಾಲ್ಲೂಕಿನ ಸಿದ್ದಕಟ್ಟೆ ಸಮೀಪದ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಭಾನುವಾರ ಚಾಲನೆ ನೀಡಿದರು 
ಬಂಟ್ವಾಳ ತಾಲ್ಲೂಕಿನ ಸಿದ್ದಕಟ್ಟೆ ಸಮೀಪದ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಭಾನುವಾರ ಚಾಲನೆ ನೀಡಿದರು    

ಬಂಟ್ವಾಳ: ಕೃಷಿಕರು ಮತ್ತು ಸ್ಥಳೀಯ ಗ್ರಾಮಸ್ಥರು ಒಟ್ಟುಗೂಡಿ ಮನೋರಂಜನೆ ಜತೆಗೆ ಧಾರ್ಮಿಕವಾಗಿ ನಂಬಿಕೆಗೆ ಪೂರಕವಾಗಿ ಮಾಗಣೆ ದೇವರು ಮತ್ತು ದೈವಗಳ ಅನುಗ್ರಹ ಪಡೆಯುವ ನಿಟ್ಟಿನಲ್ಲಿ ಕಂಬಳವನ್ನು ನಿರಂತರವಾಗಿ ನಡೆಸುವ ಅಗತ್ಯವಿದೆ ಎಂದು ಪೂಂಜ ಕ್ಷೇತ್ರದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಹೇಳಿದ್ದಾರೆ.

ಇಲ್ಲಿನ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ಭಾನುವಾರ ಆರಂಭಗೊಂಡ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪಡ್ಯಾರಬೆಟ್ಟು ಕೊಡಮಣಿತ್ತಾಯ ದೈವಸ್ಥಾನದ ಧರ್ಮದರ್ಶಿ ಎ.ಜೀವಂದರ ಕುಮಾರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕುಕ್ಕಿಪಾಡಿ ಗ್ರಾ.ಪಂ.ಅಧ್ಯಕ್ಷ ಶೇಖರ ಶೆಟ್ಟಿ ಬದ್ಯಾರು, ಸಿದ್ದಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಪಿಡಿಒ ಗಣೇಶ್ ಶೆಟ್ಟಿ ಆರಂಬೋಡಿ ಮಾತನಾಡಿದರು.

ADVERTISEMENT

ರಾಯಿ ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಬ್ಯಾಂಕ್ ಅಧಿಕಾರಿ ಸಂತೋಷ್ ಕುಮಾರ್ ಚೌಟ, ಸಮಿತಿ ಗೌರವಾಧ್ಯಕ್ಷ ಜಗತ್ಪಾಲ ಶೆಟ್ಟಿ ಉಮನೊಟ್ಟು, ಸಂಜೀವ ಶೆಟ್ಟಿ ಗುಂಡ್ಯಾರು, ಕೆ ಎಂ ಎಫ್ ನಿರ್ದೇಶಕ ಪ್ರಭಾಕರ ಹುಲಿಮೇರು, ಕೃಷಿಕ ಚಂದ್ರಶೇಖರ ಗೌಡ, ಓಟಗಾರ ಆನಂದ ಶೆಟ್ಟಿ ಹಕ್ಕೇರಿ, ಕುಟ್ಟಿ ಶೆಟ್ಟಿ ಹಕ್ಕೇರಿ, ಕರಿಯಣ್ಣ ಶೆಟ್ಟಿ ಹಕ್ಕೇರಿ, ದಿನೇಶ್ ಹುಲಿಮೇರು, ಸ್ಥಳದಾನಿ ಸುಧೀರ್ ಶೆಟ್ಟಿ ಹೊಕ್ಕಾಡಿಗೋಳಿ, ಪಶು ವೈದ್ಯಾಧಿಕಾರಿ ಡಾ.ಬಾಲಕೃಷ್ಣ, ಪ್ರಮುಖರಾದ ಸುಧಾಕರ ಚೌಟ ಬಾವ, ಪುಷ್ಪರಾಜ ಜೈನ್, ಪುಷ್ಪರಾಜ್ ಶೆಟ್ಟಿ, ಪ್ರವೀಣ್ ಕುಲಾಲ್, ಸುರೇಶ್ ಶೆಟ್ಟಿ ಸಿದ್ದಕಟ್ಟೆ, ಸುಂದರ ಪೂಜಾರಿ ಎನ್., ಸಂತೋಷ್ ಶೆಟ್ಟಿ ಕೊನೆರೊಟ್ಟು, ಆಂಡ್ರು ರೇಗೋ, ನೋಣಯ ಪೂಜಾರಿ, ಅರುಣ್ ಬಾಕ್ಯಾರುಕೋಡಿ, ಕರಿಯ ಪೂಜಾರಿ ಹಾಜರಿದ್ದರು. ಕಂಬಳ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ಸ್ವಾಗತಿಸಿ, ಶಾಜಲ್ ಕಾರ್ಯಕ್ರಮ ನಿರೂಪಿಸಿದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.