ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಸಮೀಪದ ಪಿತ್ತಲಗುಡ್ಡೆ ಎಂಬಲ್ಲಿ ಸ್ನೇಹಿತರಿಬ್ಬರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದು, ಬಳಿಕ ಒಬ್ಬನಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಶನಿವಾರ ನಡೆದಿದೆ.
ಗಾಯಾಳುವನ್ನು ಸ್ಥಳೀಯ ಅಕ್ಕರಂಗಡಿ ನಿವಾಸಿ ಸುಲೇಮಾನ್ ಎಂದು ಗುರುತಿಸಲಾಗಿದ್ದು, ಆತನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಈತನ ಸ್ನೇಹಿತ ನೆಹರೂನಗರ ನಿವಾಸಿ ನಿಸಾರ್ ಪರಾರಿಯಾಗಿದ್ದಾನೆ. ಈತನ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿದ್ದು, ಈಚೆಗಷ್ಟೇ ಜೈಲಿನಿಂದ ಬಿಡುಗಡೆಗೊಂಡಿದ್ದ ಎನ್ನಲಾಗಿದೆ.
ಇವರಿಬ್ಬರ ನಡುವೆ ಶನಿವಾರ ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಮಾತಿನ ಚಕಮಕಿ ನಡೆದು ಆರೋಪಿಯು ಸ್ನೇಹಿತನ ಎದೆಗೆ ಚಾಕುವಿನಿಂದ ಇರಿದು ಬಳಿಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.