ADVERTISEMENT

ಮಂಗಳೂರು: ಮದ್ಯದಂಗಡಿ ವಿರುದ್ಧ ಪ್ರಕರಣ

ಮಿತಿಗಿಂತ ಹೆಚ್ಚು ಮಾರಿದ ಆರೋಪ

​ಪ್ರಜಾವಾಣಿ ವಾರ್ತೆ
Published 5 ಮೇ 2020, 16:10 IST
Last Updated 5 ಮೇ 2020, 16:10 IST
   

ಮಂಗಳೂರು: ಅಬಕಾರಿ ಕಾಯ್ದೆಯ ಮಿತಿಯನ್ನು ಉಲ್ಲಂಘಿಸಿ ಒಬ್ಬ ವ್ಯಕ್ತಿಗೆ 26.6 ಲೀಟರ್‌ ಮದ್ಯ ಮಾರಾಟ ಮಾಡಿದ ಆರೋಪದ ಮೇಲೆ ನಗರದ ಬಲ್ಮಠದಲ್ಲಿರುವ ರತ್ನಾಸ್‌ ವೈನ್‌ ಗೇಟ್‌ ಮದ್ಯದಂಗಡಿ ವಿರುದ್ಧ ಅಬಕಾರಿ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಲಾಕ್‌ಡೌನ್ ಜಾರಿಯಾದ ಬಳಿಕ 41 ದಿನಗಳ ನಿಷೇಧದ ಬಳಿಕ ಸೋಮವಾರ ಮದ್ಯ ಮಾರಾಟ ಆರಂಭವಾಗಿತ್ತು. ಈ ಸಂದರ್ಭದಲ್ಲಿ ರತ್ನಾಸ್‌ ವೈನ್‌ ಗೇಟ್‌ ಮಳಿಗೆಯಲ್ಲಿ ವ್ಯಕ್ತಿಯೊಬ್ಬರು ₹ 59,952 ಮೌಲ್ಯದ 26.64 ಲೀಟರ್‌ ಮದ್ಯ ಖರೀದಿಸಿರುವ ಬಿಲ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿತ್ತು.

‘ಅಬಕಾರಿ ಕಾಯ್ದೆಯ ಪ್ರಕಾರ, ಒಬ್ಬ ವ್ಯಕ್ತಿಗೆ 2.3 ಲೀಟರ್‌ ಭಾರತೀಯ ಉತ್ಪಾದಿತ ಮದ್ಯ (ಐಎಂಎಲ್‌) ಮತ್ತು 18.2 ಲೀಟರ್‌ ಬಿಯರ್‌ ಮಾರಾಟ ಮಾಡಲು ಅವಕಾಶವಿದೆ. ಈ ಪ್ರಕರಣದಲ್ಲಿ ಕಾಯ್ದೆಯನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಅಬಕಾರಿ ಕಾಯ್ದೆ ಮತ್ತು ಪರವಾನಗಿ ಷರತ್ತು ಉಲ್ಲಂಘನೆ ಆರೋಪದ ಮೇಲೆ ರತ್ನಾಸ್‌ ವೈನ್‌ ಗೇಟ್‌ ಮಳಿಗೆ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ’ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತೆ ಶೈಲಜಾ ಎ. ಕೋಟೆ ತಿಳಿಸಿದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.