ADVERTISEMENT

ಭಾರತ ಬ್ಯಾಂಕ್ ಸ್ಥಾಪಕ ಜಯ ಸಿ. ಸುವರ್ಣ ನಿಧನ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 5:11 IST
Last Updated 21 ಅಕ್ಟೋಬರ್ 2020, 5:11 IST
ಜಯ ಸಿ. ಸುವರ್ಣ
ಜಯ ಸಿ. ಸುವರ್ಣ   

ಮಂಗಳೂರು: ಭಾರತ ಬ್ಯಾಂಕ್ ಸ್ಥಾಪಕ, ಬಿಲ್ಲವ ಮುಖಂಡ ಜಯ ಸಿ. ಸುವರ್ಣ (75) ಬುಧವಾರ ಮುಂಬೈಯಲ್ಲಿ ನಿಧನರಾದರು.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮೂಲ್ಕಿಯ ಸುವರ್ಣ ಅವರು ಮುಂಬೈನಲ್ಲಿ ನೆಲೆಸಿದ್ದರು. ಅವರು ಗೋರೆಗಾಂವ್‌‌ನ ಜಯಪ್ರಕಾಶ್ ಹೋಟೆಲ್ ಮಾಲೀಕ, ಸಾಯಿ ವೆಜ್ ಗ್ರೂಪ್ ಆಫ್ ಹೋಟೆಲ್‌ಗಳ ಸ್ಥಾಪಕರೂ ಆಗಿದ್ದಾರೆ.

ಮುಂಬೈನಲ್ಲಿ ಹೋಟೆಲ್ ಉದ್ಯಮದ ಜೊತೆ ಅಲ್ಲಿನ ಹಾಗೂ ಕರಾವಳಿಯ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ADVERTISEMENT

ರಾಷ್ಟ್ರೀಯ ಬಿಲ್ಲವ ಮಹಾಮಂಡಳದ ಸ್ಥಾಪಕ ಅಧ್ಯಕ್ಷರಾಗಿದ್ದರು. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇಗುಲದ ಅಭಿವೃದ್ಧಿ ಹಾಗೂ ಇತರ ಕಾರ್ಯಗಳಿಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಜೊತೆ ಕೈ ಜೋಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.