ಉಳ್ಳಾಲ: ನಗರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಇಂಟರ್ನ್ಷಿಪ್ ಮಾಡುತ್ತಿದ್ದ ಎಂಬಿಬಿಎಸ್ವಿದ್ಯಾರ್ಥಿನಿಯೊಬ್ಬರು ಭಾನುವಾರ ಸಂಜೆ ಕುತ್ತಾರ್ನಲ್ಲಿ ತಾವು ವಾಸಿಸುತ್ತಿದ್ದ ಅಪಾರ್ಟ್ಮೆಂಟ್ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೀದರ್ನ ಆನಂದ ನಗರದ ವಿಜಯಕುಮಾರ್ ಗಾಯಕವಾಡ್ ಪುತ್ರಿ ವೈಶಾಲಿ ಗಾಯಕ್ವಾಡ್ (25) ಮೃತ ವಿದ್ಯಾರ್ಥಿನಿ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ವೈಯಕ್ತಿಕ ಕಾರಣಗಳ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಗೆಳತಿ ಜೊತೆ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದ ವೈಶಾಲಿ ಅವರು ಭಾನುವಾರ ಸಂಜೆ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಉಳ್ಳಾಲಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.