ADVERTISEMENT

ಕಾರು ಅವಘಡ: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಪಾರು

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 15:06 IST
Last Updated 1 ಜುಲೈ 2020, 15:06 IST
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಎಂ. ಅವರ ಕಾರು ನಜ್ಜುಗುಜ್ಜಾಗಿರುವುದು
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಎಂ. ಅವರ ಕಾರು ನಜ್ಜುಗುಜ್ಜಾಗಿರುವುದು   

ಮೂಡುಬಿದಿರೆ: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್‌ ಎಂ. ಪ್ರಯಾಣಿಸುತ್ತಿದ್ದ ಇನೋವಾ ಕಾರು ಇಲ್ಲಿಗೆ ಸಮೀಪದ ತೋಡಾರಿನಲ್ಲಿ ಬುಧವಾರ ಉರುಳಿ ಬಿದ್ದಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ತೋಡಾರು ಬಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಕಾರು ರಸ್ತೆ ಬದಿ ಉರುಳಿ ಬಿದ್ದಿದೆ.

ಕಾರಿನಲ್ಲಿದ್ದ ಸುದರ್ಶನ್ ಎಂ. ಮತ್ತು ಕಾರು ಚಾಲಕ ಜಯ ಅಪಾಯದಿಂದ ಪಾರಾಗಿದ್ದಾರೆ. ಮೂಡುಬಿದಿರೆಯಿಂದ ಅವರು ಮಂಗಳೂರಿನಲ್ಲಿರುವ ಪಕ್ಷದ ಜಿಲ್ಲಾ ಕಚೇರಿಗೆ ತೆರಳುತ್ತಿದ್ದರು. ಇಬ್ಬರೂ ಸೀಟು ಬೆಲ್ಟ್ ಧರಿಸಿದರಿಂದ ಜೀವಪಾಯದಿಂದ ಪಾರಾಗಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.